ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಇಂದು ಭೇಟಿಯಾಗಿದ್ದಾರೆ.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮನವರಿಕೆ ಮಾಡಿದ್ದು, ಶೀಘ್ರ ಪರಿಹಾರ ಬಿಡುಗಡೆ ಕೋರಿ ಪ್ರಧಾನಿ ಮೋದಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಗದ್ದುಗೆ ಹಿಡಿದ ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎರಡನೇ ಬಾರಿಗೆ ಭೇಟಿಯಾಗುತ್ತಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರದಿಂದ ಬರ ಪರಿಹಾರ ಒಂದು ಪೈಸೆಯೂ ಬಂದಿಲ್ಲ ಎಂದು ಪಿಎಂ ವಿರುದ್ಧ ಕಿಡಿಕಾರಿದ್ದರು. ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಪ್ರಧಾನಿ ಮೋದಿ ರಾಜ್ಯದ ಮೇಲೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ದೂರಿದ್ದರು.
ಈ ಪ್ರಧಾನಿ ಮೋದಿ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿದ್ದು, ಬರ ಪರಿಹಾರ ಕುರಿತು ಚರ್ಚೆ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.
ಇದಲ್ಲದೇ ಇಂದು ನಡೆಯುವ ಇಂಡಿಯಾ ಬ್ಲಾಕ್ ನ ನಾಲ್ಕನೇ ಸಭಯೆಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಸಭೆಯ ಬಳಿಕ ಲೋಕಸಭಾ ಚುನಾವಣೆ ಕುರಿತು ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…