ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಹಗರಣದಲ್ಲಿ ಸರ್ಕಾರವೇ ನೇರ ಹೊಣೆಯನ್ನು ಹೊತ್ತು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ಹೊರ ಹಾಕಿದರು.
ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಇಲ್ಲಿ 187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ. ಇದಕ್ಕೆ ನೇರವಾಗಿ ಸರ್ಕಾರವೇ ಕಾರಣ. 187 ಕೋಟಿ ಲೂಟಿ ಹೊಡೆದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಹಿಂದೆ ಕೆ.ಎಸ್.ಈಶ್ವರಪ್ಪನವರ ರಾಜೀನಾಮೆ ಕೇಳಿದ ಕಾಂಗ್ರೆಸ್ ಸಚಿವರು ಹಾಗೂ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.
ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿಗಳನ್ನು ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಕಡೆಗಣಿಸಿದೆ. ರಸ್ತೆಗಳಲ್ಲಿ ಗುಂಡಿ, ಕಸದ ರಾಶಿ ಎಲ್ಲೆಡೆ ಕಾಣುತ್ತಿದೆ. ಪೌರಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ. ರಾಜಧಾನಿಯಲ್ಲಿ ಒಂದೇ ಒಂದು ರೂಪಾಯಿ ಕಾಮಗಾರಿ ನಡೆದಿಲ್ಲ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಗರ ವೀಕ್ಷಣೆ ಮಾಡಿದ್ದಾರೆಯೇ ಹೊರತು, ಅಭಿವೃದ್ಧಿಗೆ ಹಣ ನೀಡಿಲ್ಲ ಎಂದು ದೂರಿದರು.
ಬೆಂಗಳೂರಿನ ಜನರು ಈಗ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳುತ್ತಿದ್ದಾರೆ. ಬೆಂಗಳೂರು ಜನರು ಅತ್ಯಧಿಕ ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದ ಒಟ್ಟು ತೆರಿಗೆಯಲ್ಲಿ ಅತಿ ಹೆಚ್ಚು ಪಾಲು ಬೆಂಗಳೂರಿಂದ ಬರುತ್ತದೆ. ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿ ಕಾಂಗ್ರೆಸ್ ಸರ್ಕಾರ ಬ್ಯಾಡ್ ಬೆಂಗಳೂರು, ಕ್ರೈ ಬೆಂಗಳೂರು ಹಾಗೂ ಕಸದ ರಾಶಿಯ ಬೆಂಗಳೂರನ್ನು ನೀಡಿದೆ. ಮಳೆಗಾಲ ಆರಂಭವಾಗುವ ಮುನ್ನವೇ ಸರ್ಕಾರ ಎಚ್ಚೆತ್ತು 1 ಸಾವಿರ ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿ ಏನೂ ಅನಾಹುತವಾಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ಹೋರಾಟ ಮಾಡಲಾಗಿದೆ ಎಂದು ತಿಳಿಸಿದರು.
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…