ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಆಲಮಟ್ಟಿ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ್ದಾರೆ.
ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದ್ದು, ಸರ್ಕಾರದಿಂದ ಬಾಗಿನ ಅರ್ಪಿಸಲಾಗಿದೆ.
ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಲಮಟ್ಟಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಈ ವೇಳೆ ಕೊಪ್ಪಳದ ಜಿಲ್ಲಾಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ಖಾನ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಇದನ್ನು ಓದಿ:ಮುಡಾ ಪ್ರಕರಣ : ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್
ಇನ್ನು ಆಲಮಟ್ಟಿ ಅಣೆಕಟ್ಟಿನ ಎತ್ತರ ಬಹು ಚರ್ಚಿತ ವಿಷಯವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳ ಸಭೆ ನಡೆಸಿ ಚರ್ಚಿಸಿದ್ದರು. ಆ ವೇಳೆ ಕೃಷ್ಣಾ ಮೂರನೇ ಹಂತದ ಯೋಜನೆ ಜಾರಿಗೊಳ್ಳಲು ಭೂ ಸ್ವಾಧೀನಕ್ಕೆ ಪ್ರತಿ ಎಕರೆಗೆ 50 ಲಕ್ಷ ರೂ. ಪರಿಹಾರವನ್ನು ಹೆಚ್ಚಿಸಬೇಕೆಂದು ಸಚಿವ ಆರ್.ಬಿ.ತಿಮ್ಮಾಪುರ್ ಮನವಿ ಮಾಡಿದರು. ಇದರಿಂದ ಅಸಮಾಧಾನಗೊಂಡ ಡಿ.ಕೆ.ಶಿವಕುಮಾರ್ ಸಭೆಯಲ್ಲೇ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದರೆ ಇಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್, ಆರ್.ಬಿ.ತಿಮ್ಮಾಪುರ್ ಒಟ್ಟಿಗೆ ಕಾಣಿಸಿಕೊಂಡಿದ್ದು ವಿಶೇಷವೆನಿಸಿತು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…