Mysore
30
few clouds

Social Media

ಮಂಗಳವಾರ, 03 ಮಾರ್ಚ್ 2026
Light
Dark

ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

Devaraj urs

ಬೆಂಗಳೂರು: ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮದಿನದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಾವನೂರ್‌ ಆಯೋಗ ರಚಿಸಿ, ಅದು ನೀಡಿದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೆ ತಂದು ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಿದ ಅರಸುರವರು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕೊಂಡಾಡಿದರು.

ಅರಸುರವರು ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ಭೂಮಿಯನ್ನು ಉಳುವವನೇ ಅದರ ಒಡೆಯ ಎಂದು ಘೋಷಿಸಿದರು. ಸರ್ಕಾರ ಪ್ರತಿವರ್ಷ ಅವರ ಜನ್ಮವಾರ್ಷಿಕೋತ್ಸವವನ್ನು ಆಚರಿಸಿ ಗೌರವ ಸಲ್ಲಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Tags:
error: Content is protected !!