Devaraj urs
ಬೆಂಗಳೂರು: ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮದಿನದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಾವನೂರ್ ಆಯೋಗ ರಚಿಸಿ, ಅದು ನೀಡಿದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೆ ತಂದು ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಿದ ಅರಸುರವರು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕೊಂಡಾಡಿದರು.
ಅರಸುರವರು ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ಭೂಮಿಯನ್ನು ಉಳುವವನೇ ಅದರ ಒಡೆಯ ಎಂದು ಘೋಷಿಸಿದರು. ಸರ್ಕಾರ ಪ್ರತಿವರ್ಷ ಅವರ ಜನ್ಮವಾರ್ಷಿಕೋತ್ಸವವನ್ನು ಆಚರಿಸಿ ಗೌರವ ಸಲ್ಲಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…