ರಾಜ್ಯ

ಮೆಟ್ರೋ ಪ್ರಯಾಣ ದರ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮೆಟ್ರೋ ಪ್ರಯಾದ ಏರಿಕೆಯ ಬೆನ್ನಲ್ಲೇ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೆಟ್ರೋ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್‌ ಎಂಡಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೆಟ್ರೋದ ಪ್ರಯಾಣ ದರ ಏರಿಕೆ ಹಲವು ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೋ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್‌ ಗಮನಕ್ಕೆ ತಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಮೆಟ್ರೋ ಪ್ರಯಾಣ ದರ ಮತ್ತೆ ಪರಿಷ್ಕರಣೆ ಆಗಲಿದೆ ಎನ್ನಲಾಗಿದ್ದು, ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಸಿಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

1 hour ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

2 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

2 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

2 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

3 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

3 hours ago