ರಾಜ್ಯ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ರಾಮನಗರ: ರೈತರಿಗೆ ಏನೂ ಕೂಡ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂದರೆ ಹೇಗೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ.

ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗೆ ವೋಟು ನೀಡಲಾಗಿದೆಯೇ? ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ ಎಂದು ಟೀಕೆ ಮಾಡಿದರು.

ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ರೂ ಇತ್ತು. ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂಗೆ ತಲುಪಿದೆ.

ಇದಕ್ಕೆ ಸಂಪೂರ್ಣ ಕಾರಣಕರ್ತರು ಪ್ರಧಾನಿ ನರೇಂದ್ರ ಮೋದಿ ಅವರೇ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಮಾತು ಮಾತಿಗೂ ನಾವು ಮಣ್ಣಿನ ಮಕ್ಕಳು ಅಂತಾರೆ. ಆದರೆ ರೈತರಿಗೆ ಏನನ್ನೂ ಅನುಕೂಲ ಮಾಡದೇ ಅವರು ಹೇಗೆ ಮಣ್ಣಿನ ಮಕ್ಕಳಾಗುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

23 mins ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

50 mins ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

1 hour ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

15 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

15 hours ago