ಬೆಂಗಳೂರು: ರಾಜ್ಯ ಬಿಜೆಪಿ ವಕ್ತಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಸೇರಿದಂತೆ, 11 ಮಂದಿಯನ್ನು ಮುಖ್ಯ ವಕ್ತಾರ ಹಾಗೂ ವಕ್ತಾರರಾಗಿ ನೇಮಕ ಮಾಡಲಾಗಿದೆ. ವಿವಿಧ ವಿಭಾಗಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ವಕ್ತಾರರು ಆದೇಶ ಹೊರಡಿಸಿದ್ದಾರೆ.
ಮುಖ್ಯ ವಕ್ತಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರರಾಗಿ ವಿಸ್ತಾರ ಚಾನಲ್ ಸಂಪಾದಕ ಹರಿಪ್ರಕಾಶ್ ಕೋಣೆಮನೆ, ಛಲವಾದಿ ನಾರಾಯಣ ಸ್ವಾಮಿ ನೇಮಕಗೊಂಡಿದ್ದಾರೆ. ತೇಜಸ್ವಿನಿ ಗೌಡ, ಕೆ.ಎಸ್ ನವೀನ್, ಎಂ.ಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ ಗೌಡ, ಎಚ್ ವೆಂಕಟೇಶ್ ದೊಡೇರಿ ಅವರನ್ನು ನೇಮಕ ಮಾಡಲಾಗಿದೆ.
ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರಾಗಿ ನರೇಂದ್ರ ಮೂರ್ತಿ, ಮಾಹಿತಿ ತಂತ್ರಜ್ಞಾನ ವಿಭಾಗದ ಸಂಚಾಲಕರಾಗಿ ನಿತಿನ್ ರಾಜ್ ನಾಯಕ್, ಸಹ ಸಂಚಾಲಕರಾಗಿ ಶ್ಯಾಮಲಾ ರಘುನಂದನ್ ಅವರನ್ನು ನೇಮಿಸಲಾಗಿದೆ.
ಮಾಧ್ಯಮ ವಿಭಾಗದ ಸಂಚಾಲಕರಾಗಿ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕರಾಗಿ ಪ್ರಶಾಂತ್ ಕೆಡಂಜಿ ಅವರಿಗೆ ಸ್ಥಾನ ನೀಡಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…