ಬೆಂಗಳೂರು: ರಾಜ್ಯ ಬಿಜೆಪಿ ವಕ್ತಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಸೇರಿದಂತೆ, 11 ಮಂದಿಯನ್ನು ಮುಖ್ಯ ವಕ್ತಾರ ಹಾಗೂ ವಕ್ತಾರರಾಗಿ ನೇಮಕ ಮಾಡಲಾಗಿದೆ. ವಿವಿಧ ವಿಭಾಗಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ವಕ್ತಾರರು ಆದೇಶ ಹೊರಡಿಸಿದ್ದಾರೆ.
ಮುಖ್ಯ ವಕ್ತಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ವಕ್ತಾರರಾಗಿ ವಿಸ್ತಾರ ಚಾನಲ್ ಸಂಪಾದಕ ಹರಿಪ್ರಕಾಶ್ ಕೋಣೆಮನೆ, ಛಲವಾದಿ ನಾರಾಯಣ ಸ್ವಾಮಿ ನೇಮಕಗೊಂಡಿದ್ದಾರೆ. ತೇಜಸ್ವಿನಿ ಗೌಡ, ಕೆ.ಎಸ್ ನವೀನ್, ಎಂ.ಜಿ ಮಹೇಶ್, ಎಚ್.ಎನ್ ಚಂದ್ರಶೇಖರ್, ನರೇಂದ್ರ ರಂಗಪ್ಪ, ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ ಗೌಡ, ಎಚ್ ವೆಂಕಟೇಶ್ ದೊಡೇರಿ ಅವರನ್ನು ನೇಮಕ ಮಾಡಲಾಗಿದೆ.
ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಪ್ರಶಾಂತ್ ಮಾಕನೂರು, ಸಹ ಸಂಚಾಲಕರಾಗಿ ನರೇಂದ್ರ ಮೂರ್ತಿ, ಮಾಹಿತಿ ತಂತ್ರಜ್ಞಾನ ವಿಭಾಗದ ಸಂಚಾಲಕರಾಗಿ ನಿತಿನ್ ರಾಜ್ ನಾಯಕ್, ಸಹ ಸಂಚಾಲಕರಾಗಿ ಶ್ಯಾಮಲಾ ರಘುನಂದನ್ ಅವರನ್ನು ನೇಮಿಸಲಾಗಿದೆ.
ಮಾಧ್ಯಮ ವಿಭಾಗದ ಸಂಚಾಲಕರಾಗಿ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕರಾಗಿ ಪ್ರಶಾಂತ್ ಕೆಡಂಜಿ ಅವರಿಗೆ ಸ್ಥಾನ ನೀಡಲಾಗಿದೆ.
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…