ರಾಜ್ಯ

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ಇಂದು ಮುಂಜಾನೆ ವಿಧಿವಶರಾಗಿರುವ ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸೂಚಿಸಿ ಕಲಾಪ ಮುಗಿದ ನಂತರ ಬೆಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಸದಾಶಿವನಗರದಲ್ಲಿರುವ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಜೊತೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್‌ ಸಹ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಸ್‌.ಎಂ.ಕೃಷ್ಣ ಅವರ ರಾಜಕೀಯ ಬದುಕೇ ಒಂದು ಹೋರಾಟದ ರೀತಿ ಇದೆ. ರಾಜಕೀಯದಲ್ಲಿ 6 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ವೇಳೆ ಕರ್ನಾಟಕ ರಾಜ್ಯ ಅಭಿವೃದ್ದಿ ಕಂಡಿದೆ.

ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡುವಲ್ಲಿ ಇವರ ಕೊಡುಗೆ ಅಪಾರವಾಗಿದೆ. ಇವರಿಗೆ ಮೈಸೂರು ಜಿಲ್ಲೆಯೆಂದರೆ ತುಂಬಾ ಇಷ್ಟ. ಏಕೆಂದರೆ ಇವರ ಯೌವ್ವನದ ಬಹಳಷ್ಟು ದಿನಗಳನ್ನು ಮೈಸೂರಿನಲ್ಲೇ ಕಳೆದಿದ್ದಾರೆ. ಇವರ ಆರಂಭಿಕ ವಿದ್ಯಾಭ್ಯಾಸವು ಇಲ್ಲಿಂದಲೇ ಶುರುವಾಯಿತು ಎಂದು ಕೃಷ್ಣ ಅವರ ಬಾಲ್ಯಜೀವನವನ್ನು ಮೆಲುಕು ಹಾಕಿದರು.

ಎಸ್‌.ಎಂ.ಕೃಷ್ಣ ಅವರು, ಸಿಎಂ ಆಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್‌ ಕುಮಾರ್‌ ಅಪಹರಣ, ಕಾವೇರಿ ವಿವಾದ ಅನೇಕ ಸಮಸ್ಯೆಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

2 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

3 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

4 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

4 hours ago