ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.

ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದುಪಡಿಸಿದ ಸಿದ್ದರಾಮಯ್ಯ ಅವರು, ತಮ್ಮೆಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಮಧ್ಯಾಹ್ನದ ವೇಳೆಗೆ ಅನಿರೀಕ್ಷಿತವಾಗಿ ತಮ್ಮ ಕಾರ್ಯಕ್ರಮಗಳನ್ನು ಬದಲಿಸಿಕೊಂಡು ದಿಢೀರೆಂದು ಕೆ.ಆರ್.ಮಾರುಕಟ್ಟೆ ರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಶರಣಪ್ರಕಾಶ್ ಪಾಟೀಲ್ ಉಪಸ್ಥಿತರಿದ್ದರು.

ಆಸ್ಪತ್ರೆಗೆ ಭೇಟಿ ಮಾಡಿದ ಸಿಎಂ, ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಚಂದ್ರಾ ಲೇಔಟ್‍ನಿಂದ ಬಂದಿದ್ದ ಮಹಿಳೆಯೊಬ್ಬರು ದುಃಖಿತರಾಗಿ ತಮಗಾಗುತ್ತಿರುವ ತೊಂದರೆಯನ್ನು ಹೇಳಿಕೊಂಡಿದ್ದಲ್ಲದೆ, ಸಹಾಯ ಮಾಡುವಂತೆ ಮೊರೆಯಿಟ್ಟರು.

ಈ ವೇಳೆ ಸಿದ್ದರಾಮಯ್ಯ ಅವರ ಸರ್ಕಾರವನ್ನು ಮಹಿಳೆ ಹೊಗಳಿದ್ದು ವಿಶೇಷವಾಗಿತ್ತು. ಆಸ್ಪತ್ರೆಗೆ ತೆರಳಿದ ವೇಳೆ ಕೆಲ ಅವ್ಯವಸ್ಥೆಗಳನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಸ್ಪತ್ರೆಗಳಿಗೆ ಅಗತ್ಯವಿರುವ ಸಲಕರಣೆಗಳು ಮತ್ತು ಅದಕ್ಕೆ ಪೂರ್ವಕವಾದ ಸಿಬ್ಬಂದಿಗಳ ನೇಮಕಾತಿಯ ಬಗ್ಗೆಯೂ ಚರ್ಚೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…

5 mins ago

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌…

12 mins ago

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…

47 mins ago

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

1 hour ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

2 hours ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

3 hours ago