ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದುಪಡಿಸಿದ ಸಿದ್ದರಾಮಯ್ಯ ಅವರು, ತಮ್ಮೆಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಮಧ್ಯಾಹ್ನದ ವೇಳೆಗೆ ಅನಿರೀಕ್ಷಿತವಾಗಿ ತಮ್ಮ ಕಾರ್ಯಕ್ರಮಗಳನ್ನು ಬದಲಿಸಿಕೊಂಡು ದಿಢೀರೆಂದು ಕೆ.ಆರ್.ಮಾರುಕಟ್ಟೆ ರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಶರಣಪ್ರಕಾಶ್ ಪಾಟೀಲ್ ಉಪಸ್ಥಿತರಿದ್ದರು.
ಆಸ್ಪತ್ರೆಗೆ ಭೇಟಿ ಮಾಡಿದ ಸಿಎಂ, ರೋಗಿಗಳು ಹಾಗೂ ಅವರ ಸಂಬಂಧಿಕರ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಚಂದ್ರಾ ಲೇಔಟ್ನಿಂದ ಬಂದಿದ್ದ ಮಹಿಳೆಯೊಬ್ಬರು ದುಃಖಿತರಾಗಿ ತಮಗಾಗುತ್ತಿರುವ ತೊಂದರೆಯನ್ನು ಹೇಳಿಕೊಂಡಿದ್ದಲ್ಲದೆ, ಸಹಾಯ ಮಾಡುವಂತೆ ಮೊರೆಯಿಟ್ಟರು.
ಈ ವೇಳೆ ಸಿದ್ದರಾಮಯ್ಯ ಅವರ ಸರ್ಕಾರವನ್ನು ಮಹಿಳೆ ಹೊಗಳಿದ್ದು ವಿಶೇಷವಾಗಿತ್ತು. ಆಸ್ಪತ್ರೆಗೆ ತೆರಳಿದ ವೇಳೆ ಕೆಲ ಅವ್ಯವಸ್ಥೆಗಳನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆಸ್ಪತ್ರೆಗಳಿಗೆ ಅಗತ್ಯವಿರುವ ಸಲಕರಣೆಗಳು ಮತ್ತು ಅದಕ್ಕೆ ಪೂರ್ವಕವಾದ ಸಿಬ್ಬಂದಿಗಳ ನೇಮಕಾತಿಯ ಬಗ್ಗೆಯೂ ಚರ್ಚೆ ನಡೆಸಿದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…