ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಲ್ಲೇಶ್ವರಂ ನಿವಾಸದಲ್ಲಿ ನಟಿ ಬಿ. ಸರೋಜಾದೇವಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಅಂತಿಮ ದರ್ಶನ ಪಡೆದ ಪಡೆದು ಸರೋಜಾದೇವಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ.
ಸರೋಜಾದೇವಿ ಅವರು ಪ್ರತಿಭಾವಂತ ನಟಿಯಾಗಿದ್ದರು. ಅವರ ನಿಧನದಿಂದ ಇಡೀ ಚಿತ್ರರಂಗಕ್ಕೆ ಆಘಾತವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.

ಹಿರಿಯ ನಟಿ ಸರೋಜಾದೇವಿ ಅವರ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅವರ ಹುಟ್ಟೂರಿನಲ್ಲಿ ನೆರವೇರಿಸಲಾಗುವುದು.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ.





