ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಇದನ್ನು ಓದಿ : ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಅಲ್ಲಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಎಸ್.ಎಲ್.ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಸೇರಿದಂತೆ ರಾಜಕೀಯ ಗಣ್ಯರು ಎಸ್.ಎಲ್.ಭೈರಪ್ಪ ಅವರು ಅಂತಿಮ ದರ್ಶನ ಪಡೆದರು.
ಇಂದು ಮಧ್ಯಾಹ್ನದ ವೇಳೆಗೆ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ಕರೆತರಲಾಗುತ್ತದೆ. ನಾಳೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆ ನೇರವೇರಲಿದೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…