ರಾಜ್ಯ

ರಾಹುಲ್ ಗಾಂಧಿಯವರನ್ನು ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ. ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಚುನಾವಣಾ ಫಲಿತಾಂಶದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ 45.34, ಬಿಜೆಪಿ ಶೇ 46.04 ರಷ್ಟು ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ31.88 ರಷ್ಟು ಮಾತ್ರ ಮತಗಳು ಬಂದಿದ್ದವು. 2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ5 ರಷ್ಟು ಕುಸಿದಿದೆ ಎಂದರು.

ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್ ಕೂಡ 2019ಕ್ಕಿಂತ ಕಡಿಮೆ ಪ್ರಮಾಣದ ಮತ ಪಡೆದಿದೆ. ಆದರೂ ನಾವು ನಿರೀಕ್ಷಿತ ಪ್ರಮಾಣದಲ್ಲಿ ಸೀಟು ಗೆದ್ದಿಲ್ಲ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ಕೇಂದ್ರದಲ್ಲಿ ಅಧಿಕಾರಿದಲ್ಲಿದ್ದ ಬಿಜೆಪಿ ಮೋದಿ ಮುಖ 2014-2019 ಕ್ಕಿಂತ ಕಡಿಮೆ ಸೀಟು ಗಳಿಸಿದ್ದಾರೆ. ಮೋದಿ ಮುಖ ನೋಡಿಯೂ ಬಿಜೆಪಿಗೆ ಬಹುಮತ ಬಂದಿಲ್ಲ. ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ ಎಂದರು.

ಬಿಜೆಪಿ ಸರಳ ಬಹುಮತ ಪಡೆಯುವಲ್ಲೂ ಸೋತಿದೆ. ದೇಶದಲ್ಲಿ ಎಲ್ಲೂ ಮೋದಿಯವರ ಅಲೆ ಕಾಣಲಿಲ್ಲ. ಹೀಗಾಗಿ ಈ ಫಲಿತಾಂಶ ಮೋದಿ ಜನಪ್ರಿಯತೆ ನೆಲಕಚ್ಚಿದೆ ಎನ್ನುವುದು ಮೇಲು ನೋಟಕ್ಕೆ ಗೊತ್ತಾಗಿದೆ. ಸರ್ಕಾರ ಯಾರು ಮಾಡ್ತಾರೆ ಎಮ್ನುವುದು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.

ಮೋದಿಯವರು ಚುನಾವಣೆಯ ಕೊನೆ ಕೊನೆಗೆ ಧರ್ಮ, ದೇವರ ಹೆಸರಲ್ಲಿ ಮತ ಕೇಳಿ ನೇರವಾಗಿ ಇತರೆ ಧರ್ಮೀಯರ ವಿರುದ್ಧ ಭಾಷಣ ಮಾಡಿದರು, ಹಿಂದುಳಿದವರ ಮೀಸಲಾತಿ ಕಾಂಗ್ರೆಸ್ ಕಿತ್ತುಕೊಳ್ಳುತ್ತದೆ ಎಂದು ಸುಳ್ಳು ಹೇಳಿಕೊಂಡು ತಿರುಗಿದರೂ ಮೋದಿಯವರಿಗೆ ಬಹುಮತ ಬರಲಿಲ್ಲ. NDA ಕಳೆದ ಬಾರಿಗಿಂತ 64 ಸ್ಥಾನ ಕಳೆದುಕೊಂಡಿದೆ. ಇದು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯ ಸೋಲು ಎಂದರು.

ಈ ಸೋಲಿನ ಕಾರಣದಿಂದ ಮೋದಿಯವರಿಗೆ ಮತ್ತೆ ಪ್ರಧಾನಿ ಆಗುವ ನೈತಿಕ ಹಕ್ಕಿಲ್ಲ. ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿಗಳನ್ನು ಜೈಲಿಗೆ ಹಾಕಿದರು. ED, IT, CBI ಹೆಸರಲ್ಲಿ ಹೆದರಿಸಿದರು, ಬೆದರಿಸಿದರು ಆದರೂ ದೇಶದ ಜನ ಬಿಜೆಪಿಗೆ ಬಹುಮತ ಕೊಡಲಿಲ್ಲ. ರಾಮನ ಹೆಸರಲ್ಲಿ, ರಾಮ ಮಂದಿರದ ಹೆಸರಲ್ಲಿ ಅಯೋಧ್ಯೆಯಲ್ಲೂ ಬಿಜೆಪಿ ಸೋತಿದೆ. ಇದು ಬಿಜೆಪಿಯ ಸೋಲು ಎಂದರು.

ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದರು.

ಇಡೀ ದೇಶದಲ್ಲಿ ಕಾಂಗ್ರೆಸ್ ಮತ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದರೂ ಬಿಜೆಪಿ ಮತ ಪ್ರಮಾಣ ಕುಸಿದಿದೆ. ಕಾಂಗ್ರೆಸ್ ಕಡಿಮೆ ಸೀಟು ಗೆದ್ದರೂ ಮತ ಪ್ರಮಾಣ ಹೆಚ್ಚಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಇಡೀ ದೇಶದಲ್ಲಿ, ರಾಜ್ಯದಲ್ಲಿ 2019 ಕ್ಕಿಂತ ಬಿಜೆಪಿ ಪ್ರಭಾವ ವಿಪರೀತ ಕುಸಿದಿದೆ ಎಂದು ವಿವರಿಸಿದರು. ಕೇಂದ್ರದಲ್ಲಿ ಯಾರು ಸರ್ಕಾರ ರಚಿಸುತ್ತಾರೆ ಎನ್ನುವುದು ಅನಿಶ್ಚಿತವಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ: ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…

36 mins ago

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

3 hours ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

8 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

8 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

8 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

8 hours ago