Mysore
24
broken clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಬೀಬಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗೆ ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿಯವರ ಪತ್ರಕ್ಕೆ ಪ್ರತ್ಯುತ್ತರಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈ ಮೊದಲು 2013 ರಿಂದ 2018ರ ನಡುವೆ ತಮ ಸರ್ಕಾರ ಅಧಿಕಾರದಲ್ಲಿದ್ದಾಗ ಬೀದಿ ಬದಿಯ ವ್ಯಾಪಾರಿಗಳಿಗೆ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಚಾಲನೆ ನೀಡಲಾಯಿತು.

ವಿವಿಧ ನಗರ ವ್ಯಾಪಾರ ಸಮಿತಿಗಳನ್ನು 2017 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. 2019 ರಂದು ಮತ್ತೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. 2022 ರಲ್ಲಿ ಅದು ಪುನರಾವರ್ತನೆಯಾಗಲಿಲ್ಲ ಎಂದು ವಿಷಾದಿಸಿದ್ದಾರೆ.

ಮರಳಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೀದಿ ಬದಿ ವ್ಯಾಪಾರಿಗಳ ಕಾಯಿದೆ 2014 ನ್ನು ಆಧರಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಪ್ರಕಾರ ಬೆಂಗಳೂರು ನಗರದಲ್ಲಿ 27,655 ಮಂದಿ ಬೀದಿ ಬದಿಯ ವ್ಯಾಪಾರಿಗಳು ನೋಂದಣಿಯಾಗಿದ್ದಾರೆ. 2025 ರ ಏಪ್ರಿಲ್ ವೇಳೆಗೆ ನಗರ ವ್ಯಾಪಾರ ಸಮಿತಿಗಳು ಪೂರ್ಣಗೊಂಡಿವೆ ಎಂದು ತಿಳಿಸಿದ್ದಾರೆ.

189 ವಿವಿಧ ಮಾದರಿಯ ವ್ಯಾಪಾರ ವಲಯಗಳು 10,162 ವ್ಯಾಪಾರ ಸ್ಥಳಗಳನ್ನು ಗುರುತಿಸಲಾಗಿದೆ. ಬೀದಿಬದಿ ವ್ಯಾಪಾರಿಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅವರ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೌಲಭ್ಯಗಳು, ವಸತಿ, ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಜೊತೆಗೆ ಅವರಿಗೆ ಎಲೆಕ್ಟ್ರಾನಿಕ್ ವಾಹನಗಳನ್ನು ನೀಡುವ ಮೂಲಕ ಮತ್ತಷ್ಟು ಸಶಕ್ತಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.

2024-25ನೇ ಸಾಲಿಗೆ 3,778 ಮಂದಿಯನ್ನು ಬೀದಿಬದಿ ವ್ಯಾಪಾರದ ಗಾಡಿಗಳ ವಿತರಣೆಗಾಗಿ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!