ರಾಜ್ಯ

ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಸಿ.ಎಂ ಬೇಸರ

ಗದಗ : ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪರಿಷತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಹೇಳಿದರು.

ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ‌ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ‌ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ‌ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು.

ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು ಎಂದರು.

ಅದಕ್ಕೇ ನಮ್ಮ ಸರ್ಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ ಪ್ರಮುಖ ಆಧ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು ಎಂದರು.

ಆಂದೋಲನ ಡೆಸ್ಕ್

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

5 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

7 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

8 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

8 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

9 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

9 hours ago