ಗದಗ : ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪರಿಷತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದರು.
ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು.
ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು ಎಂದರು.
ಅದಕ್ಕೇ ನಮ್ಮ ಸರ್ಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ ಪ್ರಮುಖ ಆಧ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು ಎಂದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…