ರಾಜ್ಯ

ಹೊಸಪೇಟೆಯಲ್ಲಿ ಸರ್ಕಾರದ ಸಾಧನಾ ಸಮಾವೇಶ : ಸಿಎಂ

ವಿಜಯನಗರ(ಹೊಸಪೇಟೆ) : ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದರು.

ಗ್ಯಾರಂಟಿಗೆ ಹಣದ ಕೊರತೆಯಿಲ್ಲ
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಎಂದರು.

ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ರಚನೆ
ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸುತ್ತಿರುವ ಬಗ್ಗೆ ಉತ್ತರಿಸಿ, ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

1 hour ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

4 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

4 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

4 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

5 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

7 hours ago