cm siddaramaiah
ವಿಜಯನಗರ(ಹೊಸಪೇಟೆ) : ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದರು.
ಗ್ಯಾರಂಟಿಗೆ ಹಣದ ಕೊರತೆಯಿಲ್ಲ
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಎಂದರು.
ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ರಚನೆ
ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸುತ್ತಿರುವ ಬಗ್ಗೆ ಉತ್ತರಿಸಿ, ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು.
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…
ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…