ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು.
ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ , ಬಿಜೆಪಿ ಅವಧಿಯಲ್ಲಿ ೨೧ ಹಗರಣ ನಡೆದಿದೆ. ಎಪಿಎಂಸಿ ಹಗರಣ, ಪ್ರವಾಸೋಧ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್ ಹಗರಣ ಮುಂತಾದ ಹಗರಣಗಳು ನಡೆದಿವೆ . ನಿಮ್ಮನ್ನ ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿ ಕೂರಿಸಿದ್ದಾರೆ. ನಾವು ವಿಧಾನಸಭ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನ ಗೆದ್ದಿದ್ದೇವೆ. ಎಲ್ಲಾ ಹಗರಣಗಳನ್ನ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದರು.
ಅಲ್ಲದೆ ವಿರೋಧ ಪಕ್ಷದವರ ವಿರುದ್ಧ ೧೭೧ ಪ್ರಕರಣಗಳು ಇದೆ. ಸಂವಿಧಾನ ವಿರೋಧಿಸಿ RSS ನವರು ನಮಗೆ ಪಾಠ ಹೇಳಲು ಬರುತ್ತಾರೆ. ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡರುವ ಕಳ್ಳರನ್ನು ಸಹ ಬಿಡುವುದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಷ್ಟನೆ ನೀಡಿದರು.
ಜೊತೆಗೆ ಎಸ್ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ. ಯಾವ ಹಗರಣದ ಬಗ್ಗೆ ಇಡಿ ಬಂದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…
ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…
ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…
ದಾಸೇಗೌಡ ಓವರ್ಹೆಡ್ ಟ್ಯಾಂಕ್ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್ಆರ್ಟಿಸಿ ಬಸ್…
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…
ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…