ರಾಜ್ಯ

ಬಿಜೆಪಿ ಅವಧಿಯಲ್ಲಿಯೂ ಹಗರಣ ನಡೆದಿದೆ, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡಲ್ಲ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು.

ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ , ಬಿಜೆಪಿ ಅವಧಿಯಲ್ಲಿ ೨೧ ಹಗರಣ ನಡೆದಿದೆ. ಎಪಿಎಂಸಿ ಹಗರಣ, ಪ್ರವಾಸೋಧ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್‌ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್‌ ಹಗರಣ ಮುಂತಾದ ಹಗರಣಗಳು ನಡೆದಿವೆ . ನಿಮ್ಮನ್ನ ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿ ಕೂರಿಸಿದ್ದಾರೆ. ನಾವು ವಿಧಾನಸಭ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನ ಗೆದ್ದಿದ್ದೇವೆ. ಎಲ್ಲಾ ಹಗರಣಗಳನ್ನ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದರು.

ಅಲ್ಲದೆ ವಿರೋಧ ಪಕ್ಷದವರ ವಿರುದ್ಧ ೧೭೧ ಪ್ರಕರಣಗಳು ಇದೆ. ಸಂವಿಧಾನ ವಿರೋಧಿಸಿ RSS ನವರು ನಮಗೆ ಪಾಠ ಹೇಳಲು ಬರುತ್ತಾರೆ. ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡರುವ ಕಳ್ಳರನ್ನು ಸಹ ಬಿಡುವುದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಷ್ಟನೆ ನೀಡಿದರು.

ಜೊತೆಗೆ ಎಸ್‌ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ. ಯಾವ ಹಗರಣದ ಬಗ್ಗೆ ಇಡಿ ಬಂದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

6 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

10 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

10 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

10 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

10 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

10 hours ago