ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು.
ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ , ಬಿಜೆಪಿ ಅವಧಿಯಲ್ಲಿ ೨೧ ಹಗರಣ ನಡೆದಿದೆ. ಎಪಿಎಂಸಿ ಹಗರಣ, ಪ್ರವಾಸೋಧ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್ ಹಗರಣ ಮುಂತಾದ ಹಗರಣಗಳು ನಡೆದಿವೆ . ನಿಮ್ಮನ್ನ ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿ ಕೂರಿಸಿದ್ದಾರೆ. ನಾವು ವಿಧಾನಸಭ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನ ಗೆದ್ದಿದ್ದೇವೆ. ಎಲ್ಲಾ ಹಗರಣಗಳನ್ನ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದರು.
ಅಲ್ಲದೆ ವಿರೋಧ ಪಕ್ಷದವರ ವಿರುದ್ಧ ೧೭೧ ಪ್ರಕರಣಗಳು ಇದೆ. ಸಂವಿಧಾನ ವಿರೋಧಿಸಿ RSS ನವರು ನಮಗೆ ಪಾಠ ಹೇಳಲು ಬರುತ್ತಾರೆ. ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡರುವ ಕಳ್ಳರನ್ನು ಸಹ ಬಿಡುವುದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಷ್ಟನೆ ನೀಡಿದರು.
ಜೊತೆಗೆ ಎಸ್ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ. ಯಾವ ಹಗರಣದ ಬಗ್ಗೆ ಇಡಿ ಬಂದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…