ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು.
ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ , ಬಿಜೆಪಿ ಅವಧಿಯಲ್ಲಿ ೨೧ ಹಗರಣ ನಡೆದಿದೆ. ಎಪಿಎಂಸಿ ಹಗರಣ, ಪ್ರವಾಸೋಧ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್ ಹಗರಣ ಮುಂತಾದ ಹಗರಣಗಳು ನಡೆದಿವೆ . ನಿಮ್ಮನ್ನ ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿ ಕೂರಿಸಿದ್ದಾರೆ. ನಾವು ವಿಧಾನಸಭ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನ ಗೆದ್ದಿದ್ದೇವೆ. ಎಲ್ಲಾ ಹಗರಣಗಳನ್ನ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದರು.
ಅಲ್ಲದೆ ವಿರೋಧ ಪಕ್ಷದವರ ವಿರುದ್ಧ ೧೭೧ ಪ್ರಕರಣಗಳು ಇದೆ. ಸಂವಿಧಾನ ವಿರೋಧಿಸಿ RSS ನವರು ನಮಗೆ ಪಾಠ ಹೇಳಲು ಬರುತ್ತಾರೆ. ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡರುವ ಕಳ್ಳರನ್ನು ಸಹ ಬಿಡುವುದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಷ್ಟನೆ ನೀಡಿದರು.
ಜೊತೆಗೆ ಎಸ್ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ. ಯಾವ ಹಗರಣದ ಬಗ್ಗೆ ಇಡಿ ಬಂದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…