ರಾಜ್ಯ

ಬಿಜೆಪಿ ಅವಧಿಯಲ್ಲಿಯೂ ಹಗರಣ ನಡೆದಿದೆ, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡಲ್ಲ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು.

ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ , ಬಿಜೆಪಿ ಅವಧಿಯಲ್ಲಿ ೨೧ ಹಗರಣ ನಡೆದಿದೆ. ಎಪಿಎಂಸಿ ಹಗರಣ, ಪ್ರವಾಸೋಧ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್‌ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್‌ ಹಗರಣ ಮುಂತಾದ ಹಗರಣಗಳು ನಡೆದಿವೆ . ನಿಮ್ಮನ್ನ ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿ ಕೂರಿಸಿದ್ದಾರೆ. ನಾವು ವಿಧಾನಸಭ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನ ಗೆದ್ದಿದ್ದೇವೆ. ಎಲ್ಲಾ ಹಗರಣಗಳನ್ನ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದರು.

ಅಲ್ಲದೆ ವಿರೋಧ ಪಕ್ಷದವರ ವಿರುದ್ಧ ೧೭೧ ಪ್ರಕರಣಗಳು ಇದೆ. ಸಂವಿಧಾನ ವಿರೋಧಿಸಿ RSS ನವರು ನಮಗೆ ಪಾಠ ಹೇಳಲು ಬರುತ್ತಾರೆ. ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡರುವ ಕಳ್ಳರನ್ನು ಸಹ ಬಿಡುವುದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಷ್ಟನೆ ನೀಡಿದರು.

ಜೊತೆಗೆ ಎಸ್‌ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ. ಯಾವ ಹಗರಣದ ಬಗ್ಗೆ ಇಡಿ ಬಂದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

52 mins ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

8 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

8 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

8 hours ago