ರಾಜ್ಯ

ಬಿಜೆಪಿ ಅವಧಿಯಲ್ಲಿಯೂ ಹಗರಣ ನಡೆದಿದೆ, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡಲ್ಲ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು.

ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ , ಬಿಜೆಪಿ ಅವಧಿಯಲ್ಲಿ ೨೧ ಹಗರಣ ನಡೆದಿದೆ. ಎಪಿಎಂಸಿ ಹಗರಣ, ಪ್ರವಾಸೋಧ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್‌ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್‌ ಹಗರಣ ಮುಂತಾದ ಹಗರಣಗಳು ನಡೆದಿವೆ . ನಿಮ್ಮನ್ನ ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿ ಕೂರಿಸಿದ್ದಾರೆ. ನಾವು ವಿಧಾನಸಭ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನ ಗೆದ್ದಿದ್ದೇವೆ. ಎಲ್ಲಾ ಹಗರಣಗಳನ್ನ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದರು.

ಅಲ್ಲದೆ ವಿರೋಧ ಪಕ್ಷದವರ ವಿರುದ್ಧ ೧೭೧ ಪ್ರಕರಣಗಳು ಇದೆ. ಸಂವಿಧಾನ ವಿರೋಧಿಸಿ RSS ನವರು ನಮಗೆ ಪಾಠ ಹೇಳಲು ಬರುತ್ತಾರೆ. ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡರುವ ಕಳ್ಳರನ್ನು ಸಹ ಬಿಡುವುದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಷ್ಟನೆ ನೀಡಿದರು.

ಜೊತೆಗೆ ಎಸ್‌ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ. ಯಾವ ಹಗರಣದ ಬಗ್ಗೆ ಇಡಿ ಬಂದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

4 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

5 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

5 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

6 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

8 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

8 hours ago