ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಹಾಗೂ ಕಲ್ಲಿನಿಂದ ದಾಳಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುನಿರತ್ನ ಅವರ ಮೇಲೆ ಯಾರು ದಾಳಿ ನಡೆಸಿದ್ದಾರೋ ಗೊತ್ತಿಲ್ಲ. ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನುವುದು ನನಗೂ ಗೊತ್ತಿದೆ. ಆದರೆ ಯಾರು ಎಸೆದಿದ್ದು ಎನ್ನುವುದು ಇನ್ನೂ ಗೊತ್ತಾಗಿಲ್ಲ. ಇಬ್ಬರು ಮೊಟ್ಟೆ ಎಸೆದಿರುವ ಬಗ್ಗೆ ಮಾಹಿತಿಯಿದೆ. ಅವರು ನಮ್ಮ ಪಕ್ಷಕ್ಕೆ ಸೇರಿದ್ದಾರಾ ಅಥವಾ ಬೇರೆಯವರ ಎನ್ನುವುದು ಇನ್ನು ಗೊತ್ತಾಗಿಲ್ಲ ಎಂದರು.
ಇನ್ನು ವಾಜಪೇಯಿಯವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗವಹಿಸಿ ವಾಪಸ್ ಆಗುತ್ತಿದ್ದಾಗ ಕಲ್ಲು ಮತ್ತು ಮೊಟ್ಟೆಯಿಂದ ದಾಳಿಯಾಗಿತ್ತು. ಮುನಿರತ್ನ ಮೇಲೆ ದಾಳಿ ಮಾಡಿದವರು ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಶಾಸಕ ಮುನಿರತ್ನ ಅವರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರು. ನನ್ನ ಕೊಲೆಯ ಹಿಂದೆ ಮೂವರ ಕುಮ್ಮಕ್ಕಿದೆ. ಡಿಸಿಎಂ ಡಿಕೆಶಿ, ಸಹೋದರ ಡಿ.ಕೆ.ಸುರೇಶ್, ಕುಸುಮಾ ಅವರೇ ಇಂದಿನ ದಾಳಿಗೆ ಕಾರಣ ಎಂದು ನೇರ ಆರೋಪ ಮಾಡಿದ್ದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…