ರಾಜ್ಯ

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ. ಈ ದೃಷ್ಟಿಯಿಂದ ನನ್ನ ಲೇಖನದ ಬಗೆಗಿನ ಚರ್ಚೆಯನ್ನು ನಾನು ಸ್ವಾಗತಿಸುತ್ತೇನೆ.

ಸಾಮಾಜಿಕ ನ್ಯಾಯದ ಬಗ್ಗೆ ನಾನು ಇದೇ ಮೊದಲ ಬಾರಿ ಮಾತನಾಡಿದ್ದಲ್ಲ, ನನ್ನ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ನೋಡುತ್ತಾ ಬಂದವರಿಗೆ ಇದು ಗೊತ್ತಿರುತ್ತದೆ. ಅಧಿಕಾರ ಇರಲಿ, ಇಲ್ಲದೆ ಇರಲಿ ಸಾಮಾಜಿಕ ನ್ಯಾಯದ ಪರವಾದ ನನ್ನ ನಿಲುವು ಅಚಲ. ನಮ್ಮಲ್ಲಿನ ಜಾತಿ ವ್ಯವಸ್ಥೆ ಬಗ್ಗೆ ನನ್ನನ್ನು ಟೀಕಿಸುತ್ತಿರುವ ರಾಜಕಾರಣಿಗಳಿಗಿಂತ ಹೆಚ್ಚಿನ ಸ್ಪಷ್ಟತೆ ನನಗಿದೆ. ಈ ಬಗ್ಗೆ ನಾನು ಸಾರ್ವಜನಿಕ ಸಂವಾದಕ್ಕೆ ಸಿದ್ಧವಾಗಿದ್ದೇನೆ.

ನನ್ನ ಲೇಖನದ ಬಗ್ಗೆ ಜಾತ್ಯತೀತ ಜನತಾದಳದ ನಾಯಕರಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ವ್ಯಕಪಡಿಸಿರುವ ಪ್ರತಿಕ್ರಿಯೆ ಓದಿ ಆಶ್ಚರ್ಯವಾಗಿಲ್ಲ, ‘’ಸಿದ್ದರಾಮಯ್ಯನವರು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ” ಎಂಬ ಅವರ ಆರೋಪವನ್ನು ತಮಾಷೆಯಾಗಿ ಸ್ವೀಕರಿಸಿದ್ದೇನೆ.

ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್ ಬ್ಯಾಂಕ್ ಅಷ್ಟೆ. ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು. “ಹಿಂದೆ, ಇಂದು ಮತ್ತು ಮುಂದೆ ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ” ಎನ್ನುವುದು ಸತ್ಯ.

ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಜೆಡಿಎಸ್ ಪಕ್ಷದಲ್ಲಿ ಬೆಳೆಸಿದ್ದಾರೆ ಎಂದು ವಿನಯಪೂರ್ವಕವಾಗಿ ಕೇಳಬಯಸುವೆ. ಹಾಸನದ ಪುಟ್ಟಸ್ವಾಮಿಗೌಡ, ಸಿ.ಎಸ್.ಪುಟ್ಟೇಗೌಡ, ಜವರೇಗೌಡ, ಕೆ.ಎಂ.ವಿಶ್ವನಾಥ್, ಹನುಮೇಗೌಡ, ಮಂಡ್ಯದ ಕೆ.ಎನ್.ನಾಗೇಗೌಡ, ಕೆ.ಆರ್.ಪೇಟೆ ಕೃಷ್ಣ, ವೈ.ಕೆ.ರಾಮಯ್ಯ, ಸಿ.ಬೈರೇಗೌಡ, ಬಚ್ಚೇಗೌಡ, ಬಿ.ಎಲ್.ಶಂಕರ್, ಸಿ.ನಾರಾಯಣಸ್ವಾಮಿ, ಚೆಲುವರಾಯಸ್ವಾಮಿ ಮೊದಲಾದವರೆಲ್ಲ ಯಾಕೆ ದೇವೇಗೌಡರನ್ನು ಬಿಟ್ಟು ಹೊರಬಂದರು ಎನ್ನುವುದನ್ನು ನಾನು ವಿವರಿಸಿ ಹೇಳಬೇಕಾಗಿಲ್ಲ.

ಒಕ್ಕಲಿಗ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಕೆಂಗಲ್ ಹನುಮಂತಯ್ಯ ಅವರಿಂದ ಹಿಡಿದು ಎಸ್.ಎಂ.ಕೃಷ್ಣ ವರೆಗೆ ನೂರಾರು ಒಕ್ಕಲಿಗ ನಾಯಕರನ್ನು ಬೆಳೆಸಿದೆ. ದೇವೇಗೌಡರಿಂದ ಮೋಸಕ್ಕೊಳಗಾದ ನಾಯಕರಿಗೆ ಅವಕಾಶ ನೀಡಿ ರಾಜಕೀಯವಾಗಿ ಬೆಳೆಸುತ್ತಿರುವುದು ಕೂಡಾ ಕಾಂಗ್ರೆಸ್ ಪಕ್ಷ. ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ.

ಒಕ್ಕಲಿಗ ಸಮುದಾಯಕ್ಕೆ ಸಮರ್ಥ ನಾಯಕತ್ವ ನೀಡಲು ಸಾಧ್ಯ ಇರುವವರು ಈಗಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದು. ಡಿ.ಕೆ.ಶಿವಕುಮಾರ್, ಟಿ.ಬಿ.ಜಯಚಂದ್ರ, ಕಿಮ್ಮನೆ ರತ್ನಾಕರ್, ಎಂ.ಕೃಷ್ಣಪ್ಪ, ಕೃಷ್ಣಬೈರೇಗೌಡ, ಪಿರಿಯಾಪಟ್ಟಣ ವೆಂಕಟೇಶ್, ಹೀಗೆ ನಮ್ಮಲ್ಲಿರುವ ಒಕ್ಕಲಿಗರ ನಾಯಕರ ದೊಡ್ಡ ಪಟ್ಟಿಯೇ ಇದೆ. ಜೆಡಿಎಸ್ನಲ್ಲಿ ಎಷ್ಟು ಮಂದಿ ಒಕ್ಕಲಿಗ ನಾಯಕರಿದ್ದಾರೆ. ಮುಂದೊಂದು ದಿನ ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಯಾರಾದರೂ ರಾಜ್ಯದ ಮುಖ್ಯಮಂತ್ರಿಗಳಾದರೆ ಅದು ಕಾಂಗ್ರೆಸ್ ಪಕ್ಷದಿಂದಲೇ ಆಗಲಿದೆ ಎನ್ನುವುದನ್ನು ನಾನು ಒತ್ತು ಕೊಟ್ಟು ಹೇಳುತ್ತಿದ್ದೇನೆ.

ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರವಾಗಿರುವ ಪಕ್ಷ. ಈ ಸೈದ್ಧಾಂತಿಕ ಬದ್ಧತೆಯನ್ನು ಕೇವಲ ಮಾತಿನ ಮೂಲಕ ಮಾತ್ರವಲ್ಲ ಕೃತಿಯ ಮೂಲಕವೂ ಪಕ್ಷ ಮಾಡಿ ತೋರಿಸುತ್ತಾ ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಿಂದ ಒಕ್ಕಲಿಗರು, ಲಿಂಗಾಯತರು, ಹಿಂದುಳಿದವರು ಮುಖ್ಯಮಂತ್ರಿಗಳಾಗಿದ್ದಾರೆ, ಹಿಂದುಳಿದ ಜಾತಿಗೆ ಸೇರಿದ ನನ್ನನ್ನು ಗುರುತಿಸಿ ಎರಡನೇ ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಕಲ್ಪಿಸಿಕೊಟ್ಟಿರುವುದು ಕೂಡಾ ಕಾಂಗ್ರೆಸ್ ಪಕ್ಷ. ಇದಕ್ಕಾಗಿ ನಾನು ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಆಭಾರಿಯಾಗಿದ್ದೇನೆ.

ಜಾತಿಯಿಂದ ಮಾತ್ರವಲ್ಲ, ಅರ್ಹತೆಯ ಬಲದಿಂದಲೇ ಮುಖ್ಯಮಂತ್ರಿಯಾಗುವಂತಹ ದಲಿತ ಸಮುದಾಯದ ನಾಯಕರು ಕೂಡಾ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವುದು. ಮುಂದೊಂದ ದಿನ ದಲಿತ ಸಮುದಾಯದಿಂದ ಯಾರಾದಾರೂ ರಾಜ್ಯದ ಮುಖ್ಯಮಂತ್ರಿಯಾದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ.

ಇಂತಹದ್ದೊಂದು ಆಶಯವನ್ನು ಕೂಡಾ ವ್ಯಕ್ತಪಡಿಸುವ ಸ್ಥಿತಿಯಲ್ಲಿ ರಾಜ್ಯದ ಜೆಡಿಎಸ್ ಇಲ್ಲವೇ ಬಿಜೆಪಿ ಇದೆಯೇ? ಇದು ಕಾಂಗ್ರೆಸ್ ಪಕ್ಷ ಮತ್ತು ಬಿಜೆಪಿ, ಜೆಡಿಎಸ್ ಗಳಿಗೆಇರುವ ವ್ಯತ್ಯಾಸ. ಆದ್ದರಿಂದ ನನ್ನ ವಿರುದ್ಧ ಜಾತಿ ರಾಜಕೀಯದ ಆರೋಪ ಮಾಡುತ್ತಿರುವವರು ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago