ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಮೈಸೂರು ಮುಡಾದಲ್ಲಿ 14 ಸೈಟ್ಗಳನ್ನು ಕೊಳ್ಳೆ ಹೊಡೆದಿದ್ದಾರೆ. ಸಿದ್ದರಾಮಯ್ಯ ದಲಿತರ ಜಮೀನಿನ ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಿದ್ದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ, ಸರ್ಕಾರದ ಸಚಿವರು ಹಾಗೂ ಕಾಂಗ್ರೆಸ್ ಶಾಸಕರುಗಳೆಲ್ಲಾ, ರಾಜ್ಯಪಾಲರ ನೋಟಿಸ್ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯರಿಗೆ ನೋಟಿಸ್ ನೀಡಿದ ರಾಜ್ಯಪಾಲರನ್ನೇ ಪ್ರಶ್ನಿಸಿದ್ದಾರೆ. ಕೇವಲ ನೋಟಿಸ್ಗೆ ಗಢ ಗಢ ಎನ್ನುತ್ತಿದ್ದಾರೆ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಾವೆಲ್ಲಾ ಹೋರಾಡುತ್ತಿದ್ದೇವೆ. ಸದನದಲ್ಲಿ ಮುಡಾ ಅಕ್ರಮದ ಬಗ್ಗೆ ಮಾತನಾಡಲು ಅವಕಾಶ ನೀಡಿಲ್ಲ. ಅದಕ್ಕಾಗಿಯೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದರು.
ಇನ್ನೂ ಇಷ್ಟೆಲ್ಲಾ ಘಟನೆಗಳು ಆದ ಮೇಲೆ ಸಿಎಂ ಸ್ಥಾನದಲ್ಲಿ ಕೂರಲು ಸಿದ್ದರಾಮಯ್ಯರಿಗೆ ಯಾವುದೇ ನೈತಿಕತೆಯಿಲ್ಲ. ಹಾಗಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…