ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿರುವ ವಿಧಾನಸೌಧದ ಆವರಣದಲ್ಲಿ ಇಂದು(ಏಪ್ರಿಲ್.5) ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಬು ಜಗಜೀವನ್ ರಾಮ್ ಅವರು ದೇಶ ಕಂಡ ಮುತ್ಸದ್ದಿ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು ಎಂದರು.
ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರು ನಮ್ಮೊಂದಿಗೆ ಇಲ್ಲದಿದ್ದರೂ, ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜಯಂತಿಯಂದು ಗೌರವ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…