ರಾಜ್ಯ

ಬಾಬು ಜಗಜೀವನ್‌ ರಾಮ್‌ರವರು ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿರುವ ವಿಧಾನಸೌಧದ ಆವರಣದಲ್ಲಿ ಇಂದು(ಏಪ್ರಿಲ್‌.5) ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಬು ಜಗಜೀವನ್ ರಾಮ್ ಅವರು ದೇಶ ಕಂಡ ಮುತ್ಸದ್ದಿ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು ಎಂದರು.

ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರು ನಮ್ಮೊಂದಿಗೆ ಇಲ್ಲದಿದ್ದರೂ, ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜಯಂತಿಯಂದು ಗೌರವ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

31 mins ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

33 mins ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

36 mins ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

5 hours ago