ರಾಜ್ಯ

ಬಸವಣ್ಣನವರ ವಿಚಾರ, ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಇಂದು(ಫೆಬ್ರವರಿ.24) ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಅವರನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದ ವೇಳೆ ಮಾತನಾಡಿದ್ದಾರೆ.

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ ಆಗಿದೆ ಎಂದು ಹೇಳಿದ್ದಾರೆ.

ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು, ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ನಮಗೆ ಪೂರಕ ಎಂದಿದ್ದಾರೆ.

ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆಯಾಗಿತ್ತು. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಅಲ್ಲದೇ ನಮ್ಮ ಕಾಂಗ್ರೆಸ್ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

13 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

17 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

22 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

34 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

38 mins ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

44 mins ago