ರಾಜ್ಯ

ಬಿಜೆಪಿ ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ: ಸಿಎಂ

ಚಿಕ್ಕಮಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.‌

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಲು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರು ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಐದಕ್ಕೆ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಿಸಿದ ಜಿಲ್ಲೆಯ ಜನತೆಯ ಸಮಯಪ್ರಜ್ಞೆ ಮತ್ತು ರಾಜಕೀಯ ಪ್ರಜ್ಞೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ನಿಮಗೆ ಬಿಜೆಪಿ ಸರ್ಕಾರದ ಅಚ್ಛೆ ದಿನಗಳು ಬಂದಿದೆಯಾ ಎಂದು ಪ್ರಶ್ನಿಸಿದರು. ನೆರೆದಿದ್ದ ಜನರು ಇಲ್ಲ ಇಲ್ಲ ಎಂದು ಕೂಗಿದರು.

ಅಭಿವೃದ್ಧಿ ಶೂನ್ಯ ಬಿಜೆಪಿ ಸುಳ್ಳುಗಳ ಉತ್ಪಾದನೆ ಮಾಡುತ್ತಿದೆ. ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ ಎಂದರು.

ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿನೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ನಾವು 2013 , 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾ, ಅಲ್ವಾ ತಮ್ಮಯ್ಯ ಎಂದು ಚಿಕ್ಕಮಗಳೂರು ಶಾಸಕರನ್ನು ಪ್ರಶ್ನಿಸಿ ಬಿಜೆಪಿಗೆ ತಿವಿದರು.

4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಜಿಲ್ಲೆಯ ಶಾಸಕರುಗಳಾದ ನಯನ ಮೋಟಮ್ಮ, ಆನಂದ್ ಕುಮಾರ್, ರಾಜುಗೌಡ, ಶ್ರೀನಿವಾಸ್, ತಮಯ್ಯ ಗೌಡ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾಯಕರು ಉಪಸ್ಥಿತರಿದ್ದರು.

andolana

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

1 hour ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

1 hour ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

3 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago