ರಾಜ್ಯ

ಬಿಜೆಪಿ ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ: ಸಿಎಂ

ಚಿಕ್ಕಮಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.‌

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಲು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರು ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಐದಕ್ಕೆ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಿಸಿದ ಜಿಲ್ಲೆಯ ಜನತೆಯ ಸಮಯಪ್ರಜ್ಞೆ ಮತ್ತು ರಾಜಕೀಯ ಪ್ರಜ್ಞೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ನಿಮಗೆ ಬಿಜೆಪಿ ಸರ್ಕಾರದ ಅಚ್ಛೆ ದಿನಗಳು ಬಂದಿದೆಯಾ ಎಂದು ಪ್ರಶ್ನಿಸಿದರು. ನೆರೆದಿದ್ದ ಜನರು ಇಲ್ಲ ಇಲ್ಲ ಎಂದು ಕೂಗಿದರು.

ಅಭಿವೃದ್ಧಿ ಶೂನ್ಯ ಬಿಜೆಪಿ ಸುಳ್ಳುಗಳ ಉತ್ಪಾದನೆ ಮಾಡುತ್ತಿದೆ. ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ ಎಂದರು.

ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿನೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ನಾವು 2013 , 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾ, ಅಲ್ವಾ ತಮ್ಮಯ್ಯ ಎಂದು ಚಿಕ್ಕಮಗಳೂರು ಶಾಸಕರನ್ನು ಪ್ರಶ್ನಿಸಿ ಬಿಜೆಪಿಗೆ ತಿವಿದರು.

4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಜಿಲ್ಲೆಯ ಶಾಸಕರುಗಳಾದ ನಯನ ಮೋಟಮ್ಮ, ಆನಂದ್ ಕುಮಾರ್, ರಾಜುಗೌಡ, ಶ್ರೀನಿವಾಸ್, ತಮಯ್ಯ ಗೌಡ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾಯಕರು ಉಪಸ್ಥಿತರಿದ್ದರು.

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

6 hours ago