ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಇಂದು(ಜನವರಿ.21) ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ರಾಮ ಭಕ್ತರಾಗಿದ್ದ, ಶುದ್ಧಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಆದರೆ ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಹೇಳಿದರು.
ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ ಹಾಗೂ ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ. ಅಲ್ಲದೇ ಮಹಾತ್ಮಗಾಂಧೀಜಿ ಅವರು ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಆ ದಿನವೇ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…