ರಾಜ್ಯ

ಗಾಂಧಿ ತತ್ವ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯಲ್ಲಿ ಇಂದು(ಜನವರಿ.21) ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ರಾಮ ಭಕ್ತರಾಗಿದ್ದ, ಶುದ್ಧ‌ಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಆದರೆ ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಹೇಳಿದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ ಹಾಗೂ ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ. ಅಲ್ಲದೇ ಮಹಾತ್ಮಗಾಂಧೀಜಿ ಅವರು ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಆ ದಿನವೇ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದರು.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

3 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

4 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

4 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

4 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

5 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

5 hours ago