ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಿಲ್ಲೆಯ ಬೂವನಹಳ್ಳಿ ಗ್ರಾಮದ ಹೆಲಿಪ್ಯಾಡ್ ಆವರಣದಲ್ಲಿ ಇಂದು(ಡಿ.5) ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ರಾಜಕೀಯ
ಇಬ್ಬಂದಿತನ ಮಾಡಿ ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸುವ ಭರವಸೆಯನ್ನು ನೀಡಿದ್ದರು. ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟಿಸ್ಗಳನ್ನೂ ನೀಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು(ಡಿ.5) ರಾಜ್ಯಪಾಲರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದರ ಬಗ್ಗೆ ಮಾತನಾಡಿದ ಅವರು, ಈ ಕುರಿತು ನಾನು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಮಾಹಿತಿ ಪಡೆದ ನಂತರ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…