ರಾಜ್ಯ

ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಿಲ್ಲ, ಬದಲಿಗೆ ಕರ್ನಾಟಕ ರಾಜ್ಯಕ್ಕೆ ತಾರತಮ್ಯ ಧೋರಣೆ ತೋರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿಧಾನಸೌಧ ಕಲಾಪದಲ್ಲಿ ಇಂದು(ಮಾರ್ಚ್‌.17) ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ನೀಡಿರುವುದು ನಮ್ಮ ಪಾಲಿನ ಅನುದಾನವಲ್ಲ. ಕೇಂದ್ರ ಅದರ ಬದಲಿಗೆ ನೀಡಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧ ಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮಾಧ್ಯಮಗಳು, ರಾಜ್ಯದ ಜನತೆ, ವಿದ್ವಾಂಸಉ ಹಾಗೂ ವಿಶ್ವ ವಿದ್ಯಾನಿಲಯಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕನ್ನಡ ಮತ್ತು ಇಂಗ್ಲೀಷ್‌ ದಿನಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದನ್ನು ಸದನದಲ್ಲಿ ಗಮನ ಸೆಳೆದಿದ್ದರರೂ ಕೂಡ ಗ್ಯಾರಂಟಿಗಳ ಬಗ್ಗೆ ಬಜೆಪಿಯವರು ಸುಳ್ಳು ಹೇಳಿದ್ದಾರೆ. 2020 ರಲ್ಲಿಯೂ ನಮ್ಮ ಪಕ್ಷ ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸರ್ಕಾರದ ಅವಧಿ ಮುಗಯುವರೆಗೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಈ ದೇಶದ ಪ್ರಧಾನಿ ಮಂತ್ರಿಯವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ವ್ಯಂಗ್ಯ ಮಾಡಿದ್ದರು. ಆದರೆ ನೀವೇ ಲೋಕಸಭಾ ಚುನಾವಣೆಯ ವೇಳೆ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಾ. ಇನ್ನು ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೇ ಈ ಕೆಲಸ ಮಾಡಿದ್ದೀರಾ.

ಅರ್ಚನ ಎಸ್‌ ಎಸ್

Recent Posts

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

1 min ago

ಜೆನ್ ಝೀಗಳಿಗೆ ಒಂದೆಡೆ ದೇಶಾಭಿಮಾನ; ಮತ್ತೊಂದೆಡೆ ಅಸಮಾಧಾನ

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…

6 mins ago

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

13 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

17 hours ago