ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ( ಆಗಸ್ಟ್ 17 ) ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ: ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದರು.
ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ: ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಅವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಎಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…