ರಾಜ್ಯ

ಕರ್ನಾಟಕ ಬಜೆಟ್‌| ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್‌ ಶಾಲೆಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಬಜೆಟ್‌ ಮಂಡಿನೆ ಮಾಡಿದ ಅವರು, ರಾಜ್ಯದಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳ ನಿರ್ಮಾಣ ಮಾಡಲಾಗುವುದು. ಅಲ್ಲದೇ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು 1,500 ಕೋಟಿ ರೂ.ಮೀಸಲಿರಿಸಲಾಗಿದೆ ಎಂದರು.

ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ತಲಾ 2,000 ರೂ. ಹೆಚ್ಚಳ ಮಾಡಲಾಗುವುದು. ಶಾಲೆಗಳಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದೆ ಮಾಸಿಕ ಗೌರವಧನ 1,000 ರೂ. ಹೆಚ್ಚಳ ಮಾಡಲಾಗುವುದು. ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು, ಪ್ರವಾಸಿಗರಿಗೆ ಶುಷಿ ಮತ್ತು ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈಟೆಕ್‌ ಮತ್ಸ್ಯ ದರ್ಶಿನಿ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆಗಳ ಅಳವಡಿಕೆ

ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ರೈತರ ಆದಾಯ ಹಾಗೂ ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಮೀಸಲು ಮಾಡಲಾಗಿದೆ ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

1 hour ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

2 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

2 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

2 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

3 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

3 hours ago