ಬೆಂಗಳೂರು: ಕರ್ನಾಟಕ ಬಜೆಟ್ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಬಜೆಟ್ ಮಂಡಿನೆ ಮಾಡಿದ ಅವರು, ರಾಜ್ಯದಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಮಾಡಲಾಗುವುದು. ಅಲ್ಲದೇ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು 1,500 ಕೋಟಿ ರೂ.ಮೀಸಲಿರಿಸಲಾಗಿದೆ ಎಂದರು.
ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ತಲಾ 2,000 ರೂ. ಹೆಚ್ಚಳ ಮಾಡಲಾಗುವುದು. ಶಾಲೆಗಳಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದೆ ಮಾಸಿಕ ಗೌರವಧನ 1,000 ರೂ. ಹೆಚ್ಚಳ ಮಾಡಲಾಗುವುದು. ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು, ಪ್ರವಾಸಿಗರಿಗೆ ಶುಷಿ ಮತ್ತು ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈಟೆಕ್ ಮತ್ಸ್ಯ ದರ್ಶಿನಿ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.
ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆಗಳ ಅಳವಡಿಕೆ
ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ರೈತರ ಆದಾಯ ಹಾಗೂ ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಮೀಸಲು ಮಾಡಲಾಗಿದೆ ಎಂದು ತಿಳಿಸಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…