ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟ.ಕಾಗೇಪುರ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್ ಪಾಯ್ಸನಿಂಗ್ ಆಗಿದ್ದು, ಈ ದುರ್ಘಟನೆಯಲ್ಲಿ ಮಡಿದ ಬಾಲಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ. ಹಾಗಾಗಿ ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ವಿದ್ಯಾರ್ಥಿಗಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಹೇಳಿದ್ದಾರೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…