Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕರ್ನಾಟಕ ಬಜೆಟ್‌| ಗ್ಯಾರಂಟಿ ಯೋಜನೆಗೂ ಉಚಿತ ಕೊಡುಗೆಯಲ್ಲ, ಅವು ಸಾಮಾಜಿಕ-ಆರ್ಥಿಕ ತತ್ವದ ಹೂಡಿಕೆಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಜಾರಿಯಾದ ಪಂಚ ಗ್ಯಾರಂಟಿ ಯೋಜನೆಗಳು ಉಚಿತ ಕೊಡುಗೆಗಳಲ್ಲ. ಅವುಗಳು ಸಾಮಾಜಿಕ ಮತ್ತು ಆರ್ಥಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು ಆತ್ಮವಿಶ್ವಾಸದಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿನೆ ವೇಳೆ ತಮ್ಮ ಭಾಷಣ ಮಾಡಿದ ಅವರು, ಲಭ್ಯ ಸಂಪನ್ಮೂಲಗಳನ್ನು ಸರ್ವರಿಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣಗಳ ಮಧ್ಯೆ ಸಮತೋಲನ ಸಾಧಿಸಿ, ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯ ಮೂಲಕ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದರು.

ನಾಡಿನ ಖ್ಯಾತ ವಿದ್ವಾಂಸರಾಗಿದ್ದ ಮುಜಾಫರ್‌ ಅಸ್ಸಾದಿ ಅವರು, ಗ್ಯಾರಂಟಿ ಯೋಜನೆಗಳ ಹಿಂದೆ ಬಡತನದ ನೋವು ಮತ್ತು ಹಿಂಸೆ ಇದೆ. ಅಸಮಾನ ಭಾರತದ ಪರಿಕಲ್ಪನೆಯಿದ್ದು, ಮಹಿಳೆಯರಲ್ಲಿ ಮಡುಗಟ್ಟಿದ ನೋವುಗಳಿದೆ. ಜಗತ್ತಿನ ವಿವಿಧ ವೇದಿಕೆಗಳು ಯಾವ ಪ್ರಶ್ನೆಗಳಿಗೆ ಇಂದು ಹುಡುಕಾಟ ನಡೆಸುತ್ತಿವೆಯೋ ಅವುಗಳಿಗೆ ಕರ್ನಾಟಕ ಸರ್ಕಾರ ಉತ್ತರ ನೀಡುವ ರೂಪದಲ್ಲಿ ತನ್ನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾ ಮಾಡುತ್ತಿದೆ ಎಂದಿದ್ದರು. ಹೀಗಾಗಿ ಸಾರ್ವಜನಿಕರು ಕೊಂಡುಕೊಳ್ಳುವ ಶಕ್ತಿ ಲಭಿಸಲಿ ಎಂಬ ಆಶಯದಿಂದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ತಿಳಿಸಿದರು.

ಇನ್ನು ಮಹಿಳಾ ಸಶಕ್ತಿಕರಣದ ಮೂಲಕ ರಾಜ್ಯವನ್ನು ಮುನ್ನಡೆಸುವುದು ಒಂದು ಬಗೆಯಾದರೆ, ಹಸಿರು ಆರ್ಥಿಕತೆಯ ಮುಖಾಂತರ ಪರಿಸರದ ಬಿಕ್ಕಟ್ಟುಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದರು.

Tags:
error: Content is protected !!