ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾರಿಯಾದ ಪಂಚ ಗ್ಯಾರಂಟಿ ಯೋಜನೆಗಳು ಉಚಿತ ಕೊಡುಗೆಗಳಲ್ಲ. ಅವುಗಳು ಸಾಮಾಜಿಕ ಮತ್ತು ಆರ್ಥಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು ಆತ್ಮವಿಶ್ವಾಸದಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಮಂಡಿನೆ ವೇಳೆ ತಮ್ಮ ಭಾಷಣ ಮಾಡಿದ ಅವರು, ಲಭ್ಯ ಸಂಪನ್ಮೂಲಗಳನ್ನು ಸರ್ವರಿಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣಗಳ ಮಧ್ಯೆ ಸಮತೋಲನ ಸಾಧಿಸಿ, ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯ ಮೂಲಕ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದರು.
ನಾಡಿನ ಖ್ಯಾತ ವಿದ್ವಾಂಸರಾಗಿದ್ದ ಮುಜಾಫರ್ ಅಸ್ಸಾದಿ ಅವರು, ಗ್ಯಾರಂಟಿ ಯೋಜನೆಗಳ ಹಿಂದೆ ಬಡತನದ ನೋವು ಮತ್ತು ಹಿಂಸೆ ಇದೆ. ಅಸಮಾನ ಭಾರತದ ಪರಿಕಲ್ಪನೆಯಿದ್ದು, ಮಹಿಳೆಯರಲ್ಲಿ ಮಡುಗಟ್ಟಿದ ನೋವುಗಳಿದೆ. ಜಗತ್ತಿನ ವಿವಿಧ ವೇದಿಕೆಗಳು ಯಾವ ಪ್ರಶ್ನೆಗಳಿಗೆ ಇಂದು ಹುಡುಕಾಟ ನಡೆಸುತ್ತಿವೆಯೋ ಅವುಗಳಿಗೆ ಕರ್ನಾಟಕ ಸರ್ಕಾರ ಉತ್ತರ ನೀಡುವ ರೂಪದಲ್ಲಿ ತನ್ನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾ ಮಾಡುತ್ತಿದೆ ಎಂದಿದ್ದರು. ಹೀಗಾಗಿ ಸಾರ್ವಜನಿಕರು ಕೊಂಡುಕೊಳ್ಳುವ ಶಕ್ತಿ ಲಭಿಸಲಿ ಎಂಬ ಆಶಯದಿಂದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ತಿಳಿಸಿದರು.
ಇನ್ನು ಮಹಿಳಾ ಸಶಕ್ತಿಕರಣದ ಮೂಲಕ ರಾಜ್ಯವನ್ನು ಮುನ್ನಡೆಸುವುದು ಒಂದು ಬಗೆಯಾದರೆ, ಹಸಿರು ಆರ್ಥಿಕತೆಯ ಮುಖಾಂತರ ಪರಿಸರದ ಬಿಕ್ಕಟ್ಟುಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…