ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರಾಗಿ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರದ ವತಿಯಿಂದ ಇಂದು(ಡಿ.1) ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಕಾರ್ಯಕ್ರಮದಲ್ಲಿ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದ್ದು, ಸರ್ಕಾರದ ಪರವಾಗಿ ಪ್ರತಿ ವರ್ಷವೂ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವಿಸಿ ಅವರನ್ನು ಸ್ಮರಿಸಲಾಗುತ್ತಿದೆ ಎಂದರು.
ಹನಮಂತಯ್ಯ ಅವರು ವಿಧಾನಸೌಧವನ್ನು ಕಟ್ಟಿಸಿದಾಗ ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳಿದರು. ಏಕೀಕರಣ ಆಗಬೇಕೆಂದು ಪ್ರಬಲವಾಗಿ ನಂಬಿ ಕನ್ನಡ ನಾಡಿನ ಜನರು ಒಟ್ಟುಗೂಡಿ ಒಂದು ರಾಜ್ಯವಾಗಬೇಕೆಂದು ಬಯಸಿದವರು. ಅಲ್ಲದೇ ಕನ್ನಡ ಮಾತನಾಡುವವರು ಒಂದಾಗಿ ನಾಡಿನ ಸರ್ವತೋಮುಖ ಅಭಿವೃದ್ಧಿ ಆಗಬೇಕೆಂದು ಶ್ರಮಿಸಿ ರಾಜ್ಯಕ್ಕಾಗಿ ಕೆಲಸ ಮಾಡಿದವರು ಎಂದು ಹೇಳಿದರು.
ಇನ್ನು ಕೆಂಗಲ್ ಹನುಮಂತಯ್ಯ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರೊಂದಿಗೆ ಉತ್ತಮ ಸಂಬಂಧವನ್ನಿಟ್ಟುಕೊಂಡಿದ್ದರು. ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಅವರ ಜನಪರ ಆಡಳಿತ ದಕ್ಷತೆಯಿಂದ ಕೂಡಿತ್ತು. ಅದನ್ನು ನಾವೆಲ್ಲರೂ ಅಳವಡಿಸಿಕೊಂಡು ಅವರು ಹಾಕಿರುವ ದಾರಿಯಲ್ಲಿಯೇ ಸಾಗುವ ಪ್ರಯತ್ನ ಮಾಡಬೇಕು. ಈ ಮೂಲಕವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…