ರಾಜ್ಯ

ಕರ್ನಾಟಕ ಬಜೆಟ್‌| ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ 2025-26ನೇ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು, ರಾಜ್ಯದಲ್ಲಿ ನೂತನವಾಗಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಚಿಂತಿಸಲಾಗಿದ್ದು, ಕೆಲವು ನೂತನ ಕಾಲೇಜುಗಳನ್ನು ತೆರೆಯಲಾಗುವುದು ಎಂದರು.
ಅವುಗಳು ಈ ಕೆಳಕಂಡಂತಿವೆ.
1. ಗದಗ ಮೆಡಿಕಲ್ ಕಾಲೇಜಿನಲ್ಲಿ ಕ್ಯಾಥ್ಲ್ಯಾಬ್ ಮತ್ತು ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ.
2. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಿಎಂ ಭರ್ಜರಿ ಕೊಡುಗೆ.
3. ಕಲಬುರಗಿಯಲ್ಲಿ 92 ಕೋಟಿ ರೂ. ತಾಯಿ ಮತ್ತು ಮಕ್ಕಳ ಆಸ್ಪತ್ರೆ.
4. 304 ಕೋಟಿ ರೂ. ಹೃದ್ರೋಗ ಆಸ್ಪತ್ರೆ ಕಲಬುರಗಿಯಲ್ಲಿ ಸ್ಥಾಪನೆ.
5. 26 ಕೋಟಿ ರೂ. ವೆಚ್ಚದಲ್ಲಿ ನೆಪ್ರೊ-ಯುರಾಲಾಜಿ ಪೂರ್ಣಗೊಳಿಸಿ.
6. ಬೆಂಗಳೂರು ಸಾರ್ವಜನಿಕ ಕಟ್ಟಡ ಸೇವೆಗೆ ತೆರೆ.
7. ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು.
8. ಕೋಲಾರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವ ವೈದ್ಯಕೀಯ ಕಾಲೇಜು ಪ್ರಾರಂಭ.
9. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜುದಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ.
10. ಕರ್ನಾಟಕ ಬಜೆಟ್: 233 ಕೋಟಿ ರೂ. ಹಂಚಿಕೆ.
11. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಆಸ್ಪತ್ರೆ.
12. 2025-26ರಲ್ಲಿ ಸುಧಾರಿತ ಆರೋಗ್ಯ ಸೇವೆ ಯೋಜನೆಗಳು.
13. 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳು.
14. ಕುಳಗೇರಿ ಕ್ರಾಸ್ ಮತ್ತು ಚಿತ್ರದುರ್ಗದಲ್ಲಿ ಟ್ರಾಮಾ ಕೇರ್ ಕೇಂದ್ರಗಳು.
15. ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಎಂಡೋಕ್ರೈನಾಲಜಿ ಕೇಂದ್ರಗಳು.
16. 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆ.
17. ಕೊಪ್ಪಳದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
18. ರಾಜೀವ ಗಾಂಧಿ ಆಸ್ಪತ್ರೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಘಟಕ.
19. ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ 6 ಕೋಟಿ ರೂ. ನರ್ಸಿಂಗ್ ಕಾಲೇಜುಗಳು.
20. KKRDB ಅನುದಾನದಲ್ಲಿ Critical Vacancy ಹುದ್ದೆಗಳ ಭರ್ತಿ.

ವಿವಿಧ ಇಲಾಖೆಗಳ ಅಭಿವೃದ್ಧಿಗೆ ಅನುದಾನ ಮೀಸಲು

ವಕ್ಫ್ ಆಸ್ತಿಗಳ ನವೀಕರಣ ಮತ್ತು ದುರಸ್ತಿಗೆ 150 ಕೋಟಿ ರೂ. ಮೀಸಲಿಡಲಾಗಿದ್ದು, ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಲಾಗಿದೆ. ಅಲ್ಲದೇ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ನಕ್ಸಲ್ ಪ್ಯಾಕೇಜ್ ಆಗಿ 10 ಕೋಟಿ ಮೀಸಲಿರಿಸಲಾಗಿದೆ. ಅಲ್ಲದೇ ತೊಗರಿ ಬೆಳೆಗಾರರಿಗೆ ಬೆಲೆ ಏರಿಕೆ, ಪ್ರೋತ್ಸಾಹಧನ- ಸಿದ್ದರಾಮಯ್ಯ ಬಂಪರ್​ ಗಿಫ್ಟ್ ನೀಡಿದ್ದು, ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿರಿಸಲಾಗಿದೆ ಎಂದರು.

ಧಾರ್ಮಿಕ ದತ್ತಿ ಇಲಾಖೆಯ ಅರ್ಚಕರಿಗೆ ತಸ್ತೀಕ್ ಮೊತ್ತ ಹೆಚ್ಚಳ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಅವುಗಳನ್ನು ತರ್ಕ ಬದ್ಧಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು. ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹೊಸ ವಿಟಿಯು ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಪ್ರವಾಸಿ ಕ್ಷೇತ್ರ

ರಾಜ್ಯದ ಪ್ರವಾಸಿ ಕ್ಷೇತ್ರಕ್ಕೆ 50 ಕೋಟಿ ರೂ. ಅನುದಾನ ನೀಡಲಾಗಿದ್ದು, ಅವುಗಳಲ್ಲಿ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲು ಚಿಂತಿಸಲಾಗಿದೆ. ಹೀಗಾಗಿ ಪ್ರವಾಸಿ ಮಿತ್ರರ ಸಂಖ್ಯೆ 1,000 ಹೆಚ್ಚಳ ಮತ್ತು 24X7 ಸಹಾಯವಾಣಿಗೆ ಕ್ರಮ, ಪ್ರವಾಸಿ ತಾಣಗಳ ಮಾಹಿತಿ ಸಂಗ್ರಹಕ್ಕೆ ONE-TAC Digital Grid ತೆರೆಯಲಾಗುವುದು. ಇನ್ನು ಲಕ್ಕುಂಡಿ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಸೇರ್ಪಡೆಗೆ ಕ್ರಮ ವಹಿಸಲಾಗುವುದು. ಜೊತೆಗೆ ಅಠಾರ ಕಚೇರಿಯಾಗಿರುವ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

41 mins ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

1 hour ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

1 hour ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

1 hour ago

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

2 hours ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

2 hours ago