ರಾಜ್ಯ

ಕರ್ನಾಟಕ ಬಜೆಟ್‌| ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ 2025-26ನೇ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು, ರಾಜ್ಯದಲ್ಲಿ ನೂತನವಾಗಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಚಿಂತಿಸಲಾಗಿದ್ದು, ಕೆಲವು ನೂತನ ಕಾಲೇಜುಗಳನ್ನು ತೆರೆಯಲಾಗುವುದು ಎಂದರು.
ಅವುಗಳು ಈ ಕೆಳಕಂಡಂತಿವೆ.
1. ಗದಗ ಮೆಡಿಕಲ್ ಕಾಲೇಜಿನಲ್ಲಿ ಕ್ಯಾಥ್ಲ್ಯಾಬ್ ಮತ್ತು ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ.
2. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಿಎಂ ಭರ್ಜರಿ ಕೊಡುಗೆ.
3. ಕಲಬುರಗಿಯಲ್ಲಿ 92 ಕೋಟಿ ರೂ. ತಾಯಿ ಮತ್ತು ಮಕ್ಕಳ ಆಸ್ಪತ್ರೆ.
4. 304 ಕೋಟಿ ರೂ. ಹೃದ್ರೋಗ ಆಸ್ಪತ್ರೆ ಕಲಬುರಗಿಯಲ್ಲಿ ಸ್ಥಾಪನೆ.
5. 26 ಕೋಟಿ ರೂ. ವೆಚ್ಚದಲ್ಲಿ ನೆಪ್ರೊ-ಯುರಾಲಾಜಿ ಪೂರ್ಣಗೊಳಿಸಿ.
6. ಬೆಂಗಳೂರು ಸಾರ್ವಜನಿಕ ಕಟ್ಟಡ ಸೇವೆಗೆ ತೆರೆ.
7. ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು.
8. ಕೋಲಾರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವ ವೈದ್ಯಕೀಯ ಕಾಲೇಜು ಪ್ರಾರಂಭ.
9. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜುದಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ.
10. ಕರ್ನಾಟಕ ಬಜೆಟ್: 233 ಕೋಟಿ ರೂ. ಹಂಚಿಕೆ.
11. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಆಸ್ಪತ್ರೆ.
12. 2025-26ರಲ್ಲಿ ಸುಧಾರಿತ ಆರೋಗ್ಯ ಸೇವೆ ಯೋಜನೆಗಳು.
13. 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳು.
14. ಕುಳಗೇರಿ ಕ್ರಾಸ್ ಮತ್ತು ಚಿತ್ರದುರ್ಗದಲ್ಲಿ ಟ್ರಾಮಾ ಕೇರ್ ಕೇಂದ್ರಗಳು.
15. ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಎಂಡೋಕ್ರೈನಾಲಜಿ ಕೇಂದ್ರಗಳು.
16. 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆ.
17. ಕೊಪ್ಪಳದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
18. ರಾಜೀವ ಗಾಂಧಿ ಆಸ್ಪತ್ರೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಘಟಕ.
19. ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ 6 ಕೋಟಿ ರೂ. ನರ್ಸಿಂಗ್ ಕಾಲೇಜುಗಳು.
20. KKRDB ಅನುದಾನದಲ್ಲಿ Critical Vacancy ಹುದ್ದೆಗಳ ಭರ್ತಿ.

ವಿವಿಧ ಇಲಾಖೆಗಳ ಅಭಿವೃದ್ಧಿಗೆ ಅನುದಾನ ಮೀಸಲು

ವಕ್ಫ್ ಆಸ್ತಿಗಳ ನವೀಕರಣ ಮತ್ತು ದುರಸ್ತಿಗೆ 150 ಕೋಟಿ ರೂ. ಮೀಸಲಿಡಲಾಗಿದ್ದು, ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಲಾಗಿದೆ. ಅಲ್ಲದೇ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ನಕ್ಸಲ್ ಪ್ಯಾಕೇಜ್ ಆಗಿ 10 ಕೋಟಿ ಮೀಸಲಿರಿಸಲಾಗಿದೆ. ಅಲ್ಲದೇ ತೊಗರಿ ಬೆಳೆಗಾರರಿಗೆ ಬೆಲೆ ಏರಿಕೆ, ಪ್ರೋತ್ಸಾಹಧನ- ಸಿದ್ದರಾಮಯ್ಯ ಬಂಪರ್​ ಗಿಫ್ಟ್ ನೀಡಿದ್ದು, ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿರಿಸಲಾಗಿದೆ ಎಂದರು.

ಧಾರ್ಮಿಕ ದತ್ತಿ ಇಲಾಖೆಯ ಅರ್ಚಕರಿಗೆ ತಸ್ತೀಕ್ ಮೊತ್ತ ಹೆಚ್ಚಳ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಅವುಗಳನ್ನು ತರ್ಕ ಬದ್ಧಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು. ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹೊಸ ವಿಟಿಯು ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಪ್ರವಾಸಿ ಕ್ಷೇತ್ರ

ರಾಜ್ಯದ ಪ್ರವಾಸಿ ಕ್ಷೇತ್ರಕ್ಕೆ 50 ಕೋಟಿ ರೂ. ಅನುದಾನ ನೀಡಲಾಗಿದ್ದು, ಅವುಗಳಲ್ಲಿ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲು ಚಿಂತಿಸಲಾಗಿದೆ. ಹೀಗಾಗಿ ಪ್ರವಾಸಿ ಮಿತ್ರರ ಸಂಖ್ಯೆ 1,000 ಹೆಚ್ಚಳ ಮತ್ತು 24X7 ಸಹಾಯವಾಣಿಗೆ ಕ್ರಮ, ಪ್ರವಾಸಿ ತಾಣಗಳ ಮಾಹಿತಿ ಸಂಗ್ರಹಕ್ಕೆ ONE-TAC Digital Grid ತೆರೆಯಲಾಗುವುದು. ಇನ್ನು ಲಕ್ಕುಂಡಿ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಸೇರ್ಪಡೆಗೆ ಕ್ರಮ ವಹಿಸಲಾಗುವುದು. ಜೊತೆಗೆ ಅಠಾರ ಕಚೇರಿಯಾಗಿರುವ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

6 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago