ರಾಜ್ಯ

ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.21) ಬಜೆಟ್‌ ಮೇಲಿನ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು, 2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ ಅನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ ಎಂದರು.

ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ, ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಆಗಿದೆ ಎಂದು ಹೇಳಿದರು.

ಇನ್ನು, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

3 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

49 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

1 hour ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago