ರಾಜ್ಯ

ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.21) ಬಜೆಟ್‌ ಮೇಲಿನ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು, 2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ ಅನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ ಎಂದರು.

ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ, ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಆಗಿದೆ ಎಂದು ಹೇಳಿದರು.

ಇನ್ನು, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

7 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

10 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

11 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

12 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

12 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

13 hours ago