ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಈ ವೇಳೆ ಅವರಿಗೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇನೆ ಎಂದು ಹೇಳಿದ್ದಾರೆ.
ನವದೆಹಲಿ: ವಿದ್ಯಾರ್ಹತೆ, ತರಬೇತಿ ಇಲ್ಲದ ವೈದ್ಯಕೀಯ ವೃತ್ತಿಪರರ ನಕಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯವನ್ನುಂಟು ಮಾಡುತ್ತಿದ್ದಾರೆ.…
ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಚಿವರ ಕರೆ ಬೆಂಗಳೂರು: ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ…
ಮಂಡ್ಯ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಳವಳ್ಳಿಯ ಖಾಸಗಿ ವಸತಿ ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರು ವಿಚಾರಿಸಿದರು.…
ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ…
ಮಂಡ್ಯ : ಕಂಕಣ ಭಾಗ್ಯಕ್ಕಾಗಿ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ರೈತ…
ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ ಕೋಮುದ್ವೇಷಕ್ಕೆ ಕಾರಣರಾದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾರ್ಚ್…